ಬಾರ್ಯ: ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ.23ರಂದು ಬಾರ್ಯ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ತಣ್ಣೀರುಪಂತ ಸಿಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ರೈ ಸಂದರ್ಭಯೋಚಿತವಾಗಿ ಮಾತನಾಡಿದರು. ರಾಜೇಶ್ ರೈ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಿಜೆಪಿ ಪಕ್ಷದ ಪ್ರಮುಖರು, ಸಿಎ ಬ್ಯಾಂಕ್ ಹಾಗೂ ಹಾಲು ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರು ಜನಪ್ರತಿನಿಧಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಾರ್ಯ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನಾ ಸಭೆ