Site icon Suddi Belthangady

ಮೇಲಂತಬೆಟ್ಟು ನುಜೋಡಿ ನಿವಾಸಿ ಪ್ರಮೋದ್ ಕುಮಾರ್ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ನುಜೋಡಿ ನಿವಾಸಿ ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ನುಜೋಡಿ (80ವ) ಅವರು ಜೂ.24ರಂದು ದೈವಾದೀನರಾಗಿದ್ದಾರೆ. ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ, ಮೇಲಂತಬೆಟ್ಟು ನಾಗಬ್ರಹ್ಮ ದೇವಸ್ಥಾನದ ಆಡಳಿತ ಮೊಕ್ತೇಸರ, ಕೃಷಿಕ ಸಮಾಜದ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದರು. ಪತ್ನಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಮಕ್ಕಳಾದ ವೆನ್ಲಾಕ್ ಆಸ್ಪತ್ರೆ ವೈದ್ಯ ಡಾ. ಸೋಹನ್ ಕುಮಾರ್, ಸಚಿನ್ ಕುಮಾರ್ ನುಜೋಡಿ, ಪಲ್ಲವಿ ರಾಜು ಅವರನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನಕ್ಕೆ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಶ್ರೀದೇವಿ ಕಾಂಪ್ಲೆಕ್ಸ್ ಬಳಿ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಮೃತರ ಅಂತಿಮ ಸಂಸ್ಕಾರವು ಅವರ ಸ್ವಗೃಹದಲ್ಲಿ ನಡೆಯಲಿರುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Exit mobile version