Site icon Suddi Belthangady

ಆಲದಪದವು ಅಕ್ಷರ ಭಾರತಿ ವಿದ್ಯಾಲಯ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಆಲದಪದವು: ಅಕ್ಷರ ಭಾರತಿ ವಿದ್ಯಾಲಯ ಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ ಜೂ.21ರಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ನಡೆಸಲಾಯಿತು..

ಕಾರ್ಯಕ್ರಮದ ಉದ್ಘಾಟನೆಯನ್ನು ಅಕ್ಷರ ಭಾರತಿಯ ಸಂಚಾಲಕ ಮೋಹನ್ ರೈ ದೀಪ ಬೆಳಗಿಸಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಯೋಗ ದಿನದ ಬಗ್ಗೆ ಮಾತಾಡಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೇತ್ರಾವತಿ ವಲಯ ಮಂಗಳೂರಿನ ಸಂಚಾಲಕ ನಾರಾಯಣ್ ಅವರು ಯೋಗದ ಮಹತ್ವವನ್ನು ತಿಳಿಸಿದರು.‌ ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮೋಹನ್ ಹೆಚ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಯೋಗದ ಪ್ರಾತ್ಯಕ್ಷಿತೆಯನ್ನು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ನಾರಾಯಣ್, ಅರವಿಂದ ಹಾಗೂ ತುಕರಾಮ ಗೌಡ ನಡೆಸಿಕೊಟ್ಟರು. ಶಿಕ್ಷಕ ಸುಕೇಶ್ ಕೆ. ಕಾರ್ಯಕ್ರಮ ನಿರ್ವಹಿಸಿದರು.

Exit mobile version