ಪರಿಸರ ಉಳಿಸದಿದ್ದರೆ ಪರಿತಪಿಸಬೇಕಾದೀತು: ದಿನೇಶ್ ಬಿ.ಕೆ ಬಳಂಜ

0

ನಾರಾವಿ: ”ವಿಶ್ವ ಪರಿಸರ ದಿನಾಚರಣೆಯೆಂದರೆ ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ. ಈಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದೇ ಪರಿಸರ ದಿನದ ನಿಜವಾದ ಉದ್ದೇಶ. ಪರಿಸರವನ್ನು ಉಳಿಸದಿದ್ದರೆ ಮುಂದೊಂದು ದಿನ ಪರಿತಪಿಸಬೇಕಾದೀತು. ಪ್ಲಾಸ್ಟಿಕ್ ಮುಕ್ತ ಪರಿಸರ ಆರೋಗ್ಯಕ್ಕೆ ಸುಖಕರ”ಎಂದು ಸಂತ ಅಂತೋನಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ದಿನೇಶ್ ಬಿ.ಕೆ. ಬಳoಜ ಅಭಿಪ್ರಾಯಪಟ್ಟರು. ಅವರು ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿಯಲ್ಲಿ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಆಲ್ವಿನ್ ಸೆರಾವೋ “ಗಿಡಮರಗಳಿಗೂ ಜೀವವಿರುತ್ತದೆ. ಅವುಗಳೂ ಉಸಿರಾಡುತ್ತದೆ. ನಾವು ಸ್ವಚ್ಛವಾಗಿ ಉಸಿರಾಡಬೇಕಾದರೆ ನಮ್ಮ ಪರಿಸರವು ಸ್ವಚ್ಛವಾಗಿರಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು” ಎಂದು ತಿಳಿಸಿದರು. ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಉಪ ಪ್ರಾoಶುಪಾಲ ಸಂತೋಷ್ ಸಲ್ದಾನ, ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ. ಹಾಗೂ ಕಾಲೇಜಿನ ವಿದ್ಯಾರ್ಥಿ ಪರಿಷತ್ ನ ನಾಯಕಿ ಗ್ಲೆನಿಷಾ ಮಿರಾoದ ಉಪಸ್ಥಿತರಿದ್ದರು. ವಿದ್ಯಾರ್ಥಿ ಗನಿ ಹೆಂಝಿಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here