ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಮಂಗಳೂರಿನಲ್ಲಿರುವ ದ.ಕ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಜೂ.30ರಂದು ನಡೆಯಲಿದೆ.
ಸಾರ್ವಜನಿಕ ದೂರುಗಳು ಇದ್ದರೆ ಬೆಳ್ತಂಗಡಿಯ ವಿಘ್ನೇಶ್ ಕಾಂಪೆಕ್ಸ್ ಬಳಿ ಇರುವ ಜಿಲ್ಲಾ ಕೆಡಿಸಿ ಸದಸ್ಯ ಸಂತೋಷ್ ಕುಮಾರ್ ಅವರ ಕಚೇರಿಗೆ ನೀಡಬಹುದು ಎಂದು ಅವರು ತಿಳಿಸಿದ್ದಾರೆ.