ಬೆಳ್ತಂಗಡಿ: ತಾಲೂಕಿನ ಉಜಿರೆ ಸೈಂಟ್ ಜಾರ್ಜ್ ಚರ್ಚಿನ ನೂತನ ಟ್ರಸ್ಟ್ ಪದಾಧಿಕಾರಿಗಳ ಆಯ್ಕೆಯು ಧರ್ಮಗುರು ಫಾ. ಬಿಜು ಮ್ಯಾಥ್ಯೂ ಅಂಬಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ 2025-2026ನೇ ಸಾಲಿನ ಚರ್ಚಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯೂ ನಡೆದು ಸನ್ನಿ ಮನ್ನಿಯಕುನ್ನೆಲ್, ಆ್ಯಂಟನಿ ತೋಟಕ್ಕಟ್, ಜೋಸ್ ಪೇರುಕರೊಟ್, ಜೋಬಿ ಮುಳವನ, ಅವರನ್ನು ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ ಚರ್ಚಿನ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮನೋಜ್ ಪಟ್ಟೆರಿಲ್ ಅವರು ಕಳೆದ ವರ್ಷದ ವಾರ್ಷಿಕ ವರದಿ ಮಂಡಿಸಿದರು. ಪ್ರಾರ್ಥನೆಯೊಂದಿಗೆ ಸಭೆ ಕೊನೆಗೊಂಡಿತು.