ಬೆಳ್ತಂಗಡಿ: ಕೋರ್ಟ್ ರಸ್ತೆಯ ಮಸೀದಿ ಬಳಿ ಜೂ.25ರಂದು ರಾತ್ರಿ 10 ಗಂಟೆಗೆ ರಸ್ತೆಗೆ ಮರ ಬಿದ್ದು ಎರಡು ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ. ತಕ್ಷಣ ಮೆಸ್ಕಾಂ ಇಲಾಖೆ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಟಿ.ಎನ್. ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಮರ ತೆರವುಗೊಳಿಸಲಾಯಿತು.
ಬೆಳ್ತಂಗಡಿ: ಕೋರ್ಟ್ ರಸ್ತೆ ಬಳಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ
