Site icon Suddi Belthangady

ಕೊಲ್ಪಾಡಿ ಶಾಲೆಗೆ ಕೊಡುಗೆಗಳ ಹಸ್ತಾಂತರ

ಬೆಳಾಲು: ಕೊಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ವಿವಿಧ ದಾನಿಗಳು ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು. ಶಾಲೆಯ ಐದನೇ ತರಗತಿಯ ನಿರ್ಗಮಿತ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಇಡುವ ಕಬ್ಬಿಣದ ಸ್ಟ್ಯಾಂಡ್, ಶಾಲಾ ಹಿರಿಯ ವಿದ್ಯಾರ್ಥಿ ಲೋಕೇಶ್ ಓನಾಜೆ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಬೆಳ್ತಂಗಡಿಯ ಮುಳಿಯ ಜುವ್ಯೆಲರ್ಸ್ ವತಿಯಿಂದ ಕೊಡೆಗಳನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿರ್ಗಮಿತ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡರು ಎಲ್ಲಾ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಲೇಖಾವತಿ, ನೂತನ ಎಸ್.ಡಿ‌.ಎಂ.ಸಿ.ಅಧ್ಯಕ್ಷ ಹರೀಶ್ ಕೆರಕೋಡಿ, ಉಪಾಧ್ಯಕ್ಷೆಯಾಗಿ ಆಯ್ಕೆಯಾದ ತೀರ್ಥಲತಾ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಮಾಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅತಿಥಿ ಶಿಕ್ಷಕ ದಿನೇಶ್ ಕೆ ಸ್ವಾಗತಿಸಿದರು. ಗೌರವ ಶಿಕ್ಷಕ ಕರಿಯಣ್ಣ ಗೌಡ ವಂದಿಸಿದರು.

Exit mobile version