ಬೆಳ್ತಂಗಡಿ: ಬೆಳ್ತಂಗಡಿಯ ಚರ್ಚ್ ರಸ್ತೆಯ ಸಮೀಪ ಇರುವ ಸಾಲು ಮರದ ಸಾಲು ಮರದ ತಿಮ್ಮಕ್ಕ ಟ್ರೇ ಪಾರ್ಕ್ ಒಳಗೆ ಆನ್ಯಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಸುದ್ದಿ ಬಿಡುಗಡೆ ಪತ್ರಿಕೆ ಹಾಗೂ ಸುದ್ದಿ ನ್ಯೂಸ್ ಚಾನೆಲ್ನಲ್ಲಿ ಪ್ರಕಟಿಸಲಾಗಿರುವ ವರದಿಗೆ ಅರಣ್ಯ ಇಲಾಖಾಧಿಕಾರಿಗಳು ಸ್ಪಂದಿಸಿದ್ದಾರೆ. ಬೆಳ್ತಂಗಡಿ ಸಾಮಾಜಿಕ ವಲಯ ಆರಣ್ಯಾಧಿಕಾರಿ ತ್ಯಾಗರಾಜ್ ಅವರು ಜೂ.13ರಂದು ಪಾರ್ಕ್ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪಾರ್ಕ್ ಗೆ ಬರುವ ಸಾರ್ವಜನಿಕರು ನಿರ್ಜನ ಪ್ರದೇಶಕ್ಕೆ ಹೋಗದಂತೆ ಸೂಚಿಸಿದ್ದಾರೆ. ತಂತಿ ಬೇಲಿ ಅಳವಡಿಸಿದ್ದಾರೆ. ಅಲ್ಲದೆ ಅಲ್ಲಲ್ಲಿ ಸಿಸಿ ಕ್ಯಾಮರಾಗಳನ್ನು ದುರಸ್ತಿ ಪಡಿಸಲು ಸೂಚಿಸಿದ್ದಾರೆ. ಅಲ್ಲದೆ ಎಚ್ಚರಿಕೆಯ ಬ್ಯಾನರ್ಗಳನ್ನು ಆಳವಡಿಸಲು ಸಿಬ್ಬಂದಿಗಳಿಗೆ ಆದೇಶಿಸಿದ್ದಾರೆ.
ರಾತ್ರಿ ಸಮಯದಲ್ಲಿ ಸಿಬ್ಬಂದಿಗಳ ನಿಯೋಜನೆ: ಟೀ ಪಾರ್ಕ್ಗೆ ಭೇಟಿ ನೀಡಲು ನೀಡಿರುವ ಸಮಯವನ್ನು ಹೊರತುಪಡಿಸಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಅನುಮತಿ ಇಲ್ಲದೆ ಪಾರ್ಕ್ ಗೆ ಭೇಟಿ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಲು ರಾತ್ರಿ ಸಮಯದಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅದನ್ನು ಮೀರಿ ಪಾರ್ಕ್ಗೆ ಅನುಮತಿ ಇಲ್ಲದೆ ಭೇಟಿ ನೀಡಿದಲ್ಲಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ತಿಳಿಸಿದ್ದಾರೆ.