ಗುರುವಾಯನಕೆರೆ: ವಿಜಯ ರತ್ನ – 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು, ನಾವೂರು ವತಿಯಿಂದ ಗೌರವಾರ್ಪಣೆ ಮಾಡಲಾಯಿತು.
ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಉಂಬಾಜೆ, ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಗಣೇಶ್ ಎನ್ ನಾವೂರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆನಂದ ಅಡೀಲು, ನವಭಾರತ ಗೆಳೆಯರ ಬಳಗದ ಗೌರವಾಧ್ಯಕ್ಷರಾದ ಅರುಣ್ ಕುಮಾರ್, ಪ್ರಮುಖರಾದ ಪ್ರದೀಪ್ ನಾವೂರು, ವಿನೋದ್ ಕಲ್ಲಾಜೆ, ನಿತೇಶ್ ಇಂದಬೆಟ್ಟು, ಅವಿನಾಶ್ ಇಂದಬೆಟ್ಟು ಜೊತೆಗಿದ್ದರು.