ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಹಾಗೂ ರಕ್ತದಾನ ಶಿಬಿರ

0

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸಂಘ‌ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್, ಒಕ್ಕಲಿಗ ಗೌಡರ ಯುವ ವೇದಿಕೆ, ಮಾಹಿಳಾ ವೇದಿಕೆ, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಜಿರೆ ಇವರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆ ಲಾಯಿಲ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಉಜಿರೆ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ.27ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಮಂದಿರ ಬಳಿ ಇರುವ ಬಯಲು ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟನೆಯನ್ನು ಲಾಯಿಲ ಪ್ರಸನ್ನ ಎಜ್ಯುಕೇಶನ್ ಅಧ್ಯಕ್ಷ ಕೆ.ಗಂಗಾಧರ ಗೌಡ ಮಾಡಿದರು. ವೇದಿಕೆಯಲ್ಲಿ ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ ಗೌಡ, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ವಕೀಲ ಸಂಘದ ಅಧ್ಯಕ್ಷ ವಸಂತ ಮರಕಡ, ಜಿಲ್ಲಾ ಒಕ್ಕಲಿಗ ಗೌಡರ ಸಂಘದ ನಿರ್ದೇಶಕ ವಿಜಯ ಗೌಡ ವೇಣೂರು, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ, ಜಯಂತ ಗೌಡ, ವಕೀಲ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ., ಜಿಲ್ಲಾ ಒಕ್ಕಲಿಗ ಗೌಡರ ಟ್ರಸ್ಟ್ ನ ಜಿಲ್ಲಾ ಕಾರ್ಯದರ್ಶಿ ಸೂರಜ್ ವಳಂಬ್ರ, ಒಕ್ಕಲಿಗ ಗೌಡರ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಭರತ್ ಗೌಡ, ಮಂಗಳೂರು ಕೆ.ಎಂ.ಸಿ ವೈದ್ಯಕೀಯ ಅಧಿಕಾರಿ ಡಾ.ಸಿಂಚನ, ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಒಕ್ಕಲಿಗರ ಗೌಡರ ಮಹಿಳಾ ಯುವ ವೇದಿಕೆಯ ಅಧ್ಯಕ್ಷೆ ಅನುಪಮ ಸತೀಶ್ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಸ್ವಾಗತಿಸಿ, ನಿತಿನ್ ಸುರುಳಿ ನಿರೂಪಿಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here