Site icon Suddi Belthangady

ಕೊಯ್ಯೂರು: ಸ. ಪ. ಪೂ. ಕಾಲೇಜಿನಲ್ಲಿ ಜ್ಞಾನಪೀಠ ಪುರಸ್ಕೃತರು ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

ಕೊಯ್ಯೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಮತ್ತು ಬೆಳ್ತಂಗಡಿ ಹೋಬಳಿ ಘಟಕ ಹಾಗೂ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು- ಸಂಯುಕ್ತ ಆಶ್ರಯದಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1 ಕಾರ್ಯಕ್ರಮ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಪ್ರಾಂಶುಪಾಲ ಮೋಹನ ಗೌಡ ನೆರವೇರಿಸಿ ಎಲ್ಲಾ ಉಪನ್ಯಾಸ ಮಾಲೆ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಲಿ ಎಂಬುದಾಗಿ ಶುಭ ಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ. ದಿವ ಕೊಕ್ಕಡ ಅವರು “ಕುವೆಂಪು ಅವರ ಜೀವನ ಹಾಗೂ ಸಾಹಿತ್ಯ ಇಂದಿನ ಗ್ರಾಮೀಣ ಬದುಕಿಗೆ ಹಿಡಿದ ಕೈ ಗನ್ನಡಿಯಂತಿದೆ. ಜಾತಿ, ಧರ್ಮ ಮೇಲು-ಕೀಳು ಎಂಬ ಬೇಧ-ಭಾವವಿಲ್ಲದೆ ಕುವೆಂಪು ರವರ ಆಶಯದಂತೆ ವಿಶ್ವ ಮಾನವರಾಗೋಣ” ಎಂಬುದಾಗಿ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ ಅವರು “ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡು-ನುಡಿ, ಭಾಷೆ, ಸಾಂಸ್ಕೃತಿಕ ವೈವಿದ್ಯ ತೆಯನ್ನು ಗುರುತಿಸಿ, ಬೆಳೆಸಲು ಪ್ರೋತ್ಸಾಹಿಸುತ್ತದೆ. ರಾಷ್ಟ್ರ ಕವಿ ಕುವೆಂಪು ಅವರು ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರ ಗಳಲ್ಲಿ ಕೈ ಯಾಡಿಸಿ ಭಾಷಾ ಪ್ರೌಡಿಮೆ ಯನ್ನು ಮೆರೆದಿ ದ್ದಾರೆ” ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಭೂತ ಪೂರ್ವ ಸಾಧನೆಗಾಗಿ ಡಿ.ಯದುಪತಿ ಗೌಡ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ, ವಿನಯ, ಚಿರಸ್ವಿ, ವಿದ್ಯಾ, ಐಶ್ವರ್ಯ ಪ್ರಾರ್ಥನೆ ಗೈದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪವಿತ್ರ ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆಗೈದರು. ರಾಜ್ಯಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ವಂದಿಸಿದರು.

Exit mobile version