ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ-ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ವವಾದದ್ದು: ಸೀತಾರಾಮ್ ಕೇವಳ

0

ಬೆಳ್ತಂಗಡಿ:ಜೂ. 28ರಂದು ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸೀತಾರಾಮ್ ಕೇವಳ ಅವರು ಒಳ್ಳೆಯ ಶಿಕ್ಷಣ ಹೇಗಿರಬೇಕು, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳನ್ನು ಉತ್ತಮ ಮನುಷ್ಯನಾಗಿ ಮಾರ್ಪಾಡುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರದ ಕುರಿತು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ಶಾರೀರಿಕ ಬೆಳವಣಿಗೆಯ ಪ್ರಾಮುಖ್ಯ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ನೋಟರಿ ವಕೀಲರು ಬೆಳ್ತಂಗಡಿ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ಗೌಡ, ಉಪಾಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಅವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಕಳೆದ ಶೈಕ್ಷಣಿಕ ವರ್ಷದಲ್ಲಿ ವಾಣಿ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು.

ಶಿಕ್ಷಕಿ ಮೊಹನಾಂಗಿ ಶಿಕ್ಷಕ-ರಕ್ಷಕ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು. ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಮಮತಾ ನಿರೂಪಿಸಿದರು. ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಸಹಕರಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ವಂದಿಸಿದರು.

LEAVE A REPLY

Please enter your comment!
Please enter your name here