ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

0

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯ ಪಾಲಕ ಪೋಷಕರ ಸಭೆಯು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಶಾಲಾ ಮಕ್ಕಳು ಸ್ವಾಗತ ನೃತ್ಯ ಮಾಡಿದರು. ಶಾಲಾ ಸಂಚಾಲಕರು ವೇದಿಕೆಯಲ್ಲಿರುವ ಅತಿಥಿಗಳ ಜೊತೆಗೂಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ವಾರ್ಷಿಕ ವರದಿಯನ್ನು ಸಹ ಶಿಕ್ಷಕ ರವಿಕುಮಾರ್ ಮಂಡಿಸಿದರು. ಶಾಲೆಯ ಪ್ರಾಂಶುಪಾಲ ಫಾ. ವಿಜಯ್ ಲೋಬೊ ಅವರು ಪ್ರಾಥಮಿಕವಾಗಿ ಮಾತನಾಡಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಸರ್ವರ ಸಹಕಾರ ಕೋರಿದರು. ತದನಂತರ ಕಳೆದ ಎಸ್. ಎಸ್. ಎಲ್. ಸಿ ಹಾಗೂ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ಫಾ.ಆಂಟೆನಿ ಪ್ರಕಾಶ್ ಮೊಂತರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಯ ಬೌದ್ಧಿಕ ಮಾನಸಿಕ ಅಧ್ಯಾತ್‌ಮಿಕ ಬೆಳವಣಿಗೆಗೆ ಪೋಷಕರ ಪಾತ್ರ ಬಹಳ ಮುಖ್ಯವಾದದ್ದು ಪೋಷಕರಿಗೆ ಶಿಸ್ತು ಸಂಯಮಗಳಿರಬೇಕು ಆಗ ಮಕ್ಕಳು ಸಮಾಜದ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯಎಂಬ ವಿಷಯದ ಬಗ್ಗೆ ಮಾರ್ಗದರ್ಶನ ನೀಡಿದರು.

ಶಿಕ್ಷಕ ರಕ್ಷಕ ಸಂಘಕ್ಕೆ ನೂತನ ಸದಸ್ಯರನ್ನು ಆಯ್ಕೆ ಮಾಡಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷ ಸ್ಥಾನದಿಂದ ಶಾಲಾ ಸಂಚಾಲಕ ಮಾತನಾಡಿ ಎಲ್ಲರಿಗೂ ಶುಭವನ್ನು ಕೋರಿದರು. ವೇದಿಕೆಯಲ್ಲಿ ಚರ್ಚ್ ಆಡಳಿತ ಮಂಡಳಿ ಸದಸ್ಯರಾದ ಸ್ಥಾನಿ ಪಿಂಟ ನೋ, ರೋಶನ್ ಡಿಸೋಜ, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು. ವಸಂತ ಹೆಗ್ಡೆ ಅವರು ಸ್ವಾಗತಿಸಿದರು. ಗಣೇಶ್ ಇವರ ನಿರೂಪಿಸಿದರು. ಐರಿನ್ ರೊಡ್ರಿಗಸ್ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here