ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ:ಅಕ್ಟೋಬರ್ 12ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕ ಮಹಾಸಭೆ ನಡೆಸುವ ಬಗ್ಗೆ ಚರ್ಚೆ

0

ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆಯು ಜೂ.29ರಂದು ಬೆಳಾಲು ಗ್ರಾಮದ ಆರಿಕೋಡಿ ಯ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ರಾಘವೇಂದ್ರ ನಾಯ್ಕ ಅವರ ಮನೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್ ಎಚ್. ಎಲ್. ವಹಿಸಿದ್ದರು.

ತಾಲೂಕು ಮರಾಟಿ ಸಂಘದಿಂದ ಇದೇ ಪ್ರಥಮ ಬಾರಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಅಕ್ಟೋಬರ್ 12ರಂದು ಗುರುವಾಯನಕೆರೆಯ ಹವ್ಯಕ ಭವನದಲ್ಲಿ ನಡೆಸುವುದೆಂದು ನಿರ್ಧರಿಸಲಾಯಿತು. ಅದೇ ದಿನ ವಾರ್ಷಿಕ ಮಹಾಸಭೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವಾರ್ಷಿಕ ಮಹಾಸಭೆಯಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸಾಧನಾ ಪುರಸ್ಕಾರ ನೀಡುವ ಬಗ್ಗೆ ಚರ್ಚಿಸಲಾಯಿತು.

ತಾಲೂಕಿನ ಮರಾಟಿ ಸಮಾಜದ ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಸಂಘಕ್ಕೆ ತಮ್ಮ ಅಂಕ ಪಟ್ಟಿಯೊಂದಿಗೆ ಮಾಹಿತಿ ನೀಡುವಂತೆ ವಿನಂತಿಸಲಾಯಿತು.

ಸಭೆಯಲ್ಲಿ ಗೌರವಾಧ್ಯಕ್ಷ ಕೊರಗಪ್ಪ ನಾಯ್ಕ, ಉಪಾಧ್ಯಕ್ಷರಾದ ವಸಂತ ನಾಯ್ಕ, ಪ್ರಭಾಕರ ನಾಯ್ಕ್, ಕಾರ್ಯದರ್ಶಿಗಳಾದ ಸುರೇಶ್ ಎಚ್. ಎಲ್., ಪವಿತ್ರಾ ಲೋಕೇಶ್, ಕೋಶಾಧಿಕಾರಿ ಹರೀಶ್ ಪೆರಾಜೆ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ನಾಯ್ಕ್, ಕ್ರೀಡಾ ಕಾರ್ಯದರ್ಶಿ, ಮಾಧ್ಯಮ ಕಾರ್ಯದರ್ಶಿ ಶರತ್ ನಾಯ್ಕ್ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್, ಕಾರ್ಯಕಾರಿ ಸಮಿತಿ ಸದಸ್ಯರಾದ ರಜನೀಶ್ ನಾಯ್ಕ, ಚಂದ್ರಾವತಿ, ವಿಶಾಲ ಹಾಗೂ ಇತರರು ಭಾಗವಹಿಸಿದ್ದರು.

ಸಭೆಯಲ್ಲಿ ರಾಘವೇಂದ್ರ ನಾಯ್ಕ ಸ್ವಾಗತಿಸಿದರು. ಶರತ್ ನಾಯ್ಕ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here