ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ವೇಣೂರು ವಲಯದ ಹೊಸಪಟ್ಣ ಕಾರ್ಯಕ್ಷೇತ್ರದ ಸುರೇಕುಂಜಾ ಸಂಜೀವ ಗೌಡರು ಸುಮಾರು 5 ತಿಂಗಳಿಂದ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುತಿಸಿ ಅವರ ಆರೋಗ್ಯ ಸುಧಾರಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ವಾಟರ್ ಬೆಡ್ ವಿತರಿಸಲಾಯಿತು. ಒಕ್ಕೂಟದ ಅಧ್ಯಕ್ಷ ಪೂವಪ್ಪ ಪೂಜಾರಿ, ವಲಯದ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿ ನಳಿನಿ ಹಾಗೂ ನಾರಾಯಣ ಗೌಡರು ಉಪಸ್ಥಿತರಿದ್ದರು.
ಹೊಸಪಟ್ಣ ಸಂಜೀವ ಗೌಡರಿಗೆ ಯೋಜನೆಯಿಂದ ವಾಟರ್ ಬೆಡ್ ವಿತರಣೆ
