Site icon Suddi Belthangady

ಎಸ್.ಸಿ.ಎಸ್. ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಹಾಗೂ ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಜೂ. 28ರಂದು ಆಸ್ಪತ್ರೆಯ ಸಭಾಂಗಣದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜೀವರಾಜ್ ಸೊರಕೆಯವರು ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಚಾಲನೆ ನೀಡಿದರು.

ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಪೂರೈಸುವ ಸದುದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ರಕ್ತದಾನ ಶೇಷ್ಠದಾನವಾಗಿದ್ದು, ಪ್ರತಿಯೊಬ್ಬರ ರಕ್ತದಾನವೂ ಸಹ ಹಲವರ ಜೀವ ಉಳಿಸಲು ಸಹಾಯಕವಾಗುತ್ತದೆ ಎಂಬ ದೃಢನಂಬಿಕೆಯಿಂದ ಆಸ್ಪತ್ರೆಯ ಸಿಬ್ಬಂದಿ, ಜಿಲ್ಲೆಯ ಆರಕ್ಷಕ ಸಿಬ್ಬಂದಿ ಸೇರಿ ಹಲವಾರು ಸ್ವಯಂಸೇವಕರು ಈ ಶಿಬಿರದಲ್ಲಿ ಅತ್ಯಂತ ಉತ್ಸಾಹದಲ್ಲಿ ರಕ್ತದಾನ ಮಾಡುವುದರ ಮೂಲಕ ಮಾನವೀಯತೆಯ ಮಹತ್ವವನ್ನು ಮೆರೆದರು.

ರಕ್ತದಾನಿಗಳಿಂದ ಸಂಗ್ರಹಿಸಲಾದ ರಕ್ತವನ್ನು ರಕ್ತನಿಧಿ ಘಟಕಗಳು, ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ವಿವಿಧ ರೋಗಗಳಲ್ಲಿ ಬಳಲುತ್ತಿರುವ ಅನೇಕ ರೋಗಿಗಳ ಆರೋಗ್ಯ ಸಮಸ್ಯೆಗಳ ಸಂದರ್ಭಗಳಲ್ಲಿ ತುರ್ತು ಸಹಾಯಹಸ್ತವನ್ನು ನೀಡುವುದರ ಮೂಲಕ ಸಹಕಾರಿಯಾಗಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಜೀವರಾಜ್ ಸೊರಕೆ ತಿಳಿಸಿದರು.

ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದ ಸಮಸ್ತರಿಗೂ ಆಸ್ಪತ್ರೆಯ ವತಿಯಿಂದ ಧನ್ಯವಾದ ಸಮರ್ಪಿಸಲಾಯಿತು.

Exit mobile version