ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಸಾರ್ವಜನಿಕ ಪೂಜಾ ಸಮಿತಿ ಮಚ್ಚಿನ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಜೂ. 29ರಂದು ನಡೆಯಿತು.
ಕುಕ್ಕಿಲ ಅನಂತ ಕೃಷ್ಣ ಭಟ್ ಅವರ ಪುರೋಹಿತದೊಂದಿಗೆ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಹರ್ಷ ಬಳ್ಳಮಂಜ, ಒಕ್ಕೂಟದ ಅಧ್ಯಕ್ಷರಾದ ಜಯ ಪೂಜಾರಿ, ವಿಜಯ ಮಡಕ್ಕಿಲ, ಸುಧಾ ಆಚಾರ್ಯ, ಕುಸುಮ ದೋಟ, ಮೇಲ್ವಿಚಾರಕರಾದ ಕೇಶವ, ಸೇವಾಪ್ರತಿನಿಧಿ ಪರಮೇಶ್ವರ, ನಂದಿನಿ ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು. ✍️ ವರದಿ ಬಳ್ಳಮಂಜ