Site icon Suddi Belthangady

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ – ಬೆಳ್ತಂಗಡಿ 2025-26ರ ವರ್ಷದ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ ಜೂ. 30ರಂದು ವಾಣಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಅವರ ಘನ ಅಧ್ಯಕ್ಷತೆಯಲ್ಲಿ ನೆರವೇರಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮತ್ತು ಹೈಕೋರ್ಟ್‌ನಲ್ಲಿ ವಕೀಲರು ಮತ್ತು ನಮ್ಮ ವಿದ್ಯಾಸಂಸ್ಥೆಯ ಹಳೆವಿದ್ಯಾರ್ಥಿ ಜಿತಿನ್ ಜಿಜೊ ಅವರು ದೀಪವನ್ನು ಬೆಳಗಿಸಿ ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವನ್ನು ನೀಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಲು ಸಹಕಾರಿಯಾಗಬಲ್ಲದು, ಶಿಸ್ತು, ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿ ವಿದ್ಯಾರ್ಥಿ ಜೀವನದಲ್ಲಿ ಸಾಗುವಂತಾಗಬೇಕು ಎಂದು ಹಿತವಚನ ನೀಡಿದರು.

ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. 2025-26ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ಪ್ರಾ. ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ., ಮಂತ್ರಿಮಂಡಲದ ಉಸ್ತುವಾರಿ ಶಿಕ್ಷಕರಾದ ಮಮತಾ ಮತ್ತು ಮೊಹನಾಂಗಿ ಹೆಚ್. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಪ್ರಮಾಣ ವಚನ ಭೋದಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆ ಹಾಗೂ ಎಳವೆಯಲ್ಲಿ ನಾಯಕತ್ವ ಗುಣಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಲು ನೂತನ ಮಂತ್ರಿಮಂಡಲದ ವ್ಯವಸ್ಥೆಯು ಸಹಕಾರಿಯಾಗುತ್ತದೆ ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತಾಗಬೇಕೆಂದು ಆಶಯವನ್ನು ವ್ಯಕ್ತಪಡಿಸಿದರು.

ವಿಧ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭಗೊಂಡಿತು. 10ನೇ ತರಗತಿ ವಿದ್ಯಾರ್ಥಿನಿ ಅನನ್ಯ ಆರ್. ಶೆಟ್ಟಿ ಸ್ವಾಗತಿಸಿ, 10ನೇ ತರಗತಿ ವಿಧ್ಯಾರ್ಥಿನಿ ಪ್ರಾಪ್ತಿ ಮತ್ತು ಅಕ್ಷರ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. 10ನೇ ತರಗತಿ ವಿದ್ಯಾರ್ಥಿ ಮಾ. ಕುಶನ್ ಪಿ. ವಂದನಾರ್ಪಣೆಗೈದರು.

Exit mobile version