Site icon Suddi Belthangady

ಪ್ರಕೃತಿಯ ಉಳಿವು, ನಮ್ಮೆಲ್ಲರ ಉಳಿವು: ಪ್ರಸನ್ನ ಪಡ್ಡಂದಡ್ಕ

ಬೆಳ್ತಂಗಡಿ: ಪರಿಸರ ಉಳಿಸಿ, ಪರಿಸರ ಬೆಳೆಸಿ ಎನ್ನುವ ಉಕ್ತಿಯಂತೆ ಎಕ್ಸಲೆಂಟ್ ಸಿ.ಬಿ.ಎಸ್‌.ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ವನಮಹೋತ್ಸವ ಕಾರ್ಯಕ್ರಮವನ್ನು ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಪ್ರಸನ್ನ ಅವರ ಮನೆಯ ಸುತ್ತಮುತ್ತಲಿನ ವಿಶಾಲ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದ ಮೂಲ ರೂವಾರಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಸ್ವತಃ ತಾವೇ ಗಿಡವನ್ನು ನೆಡುವ ಮೂಲಕ ಮಕ್ಕಳಿಗೆ ಪರಿಸರದ ಹಾಗೂ ವನಸಂಪತ್ತಿನ ಉಳಿವಿನ ಅರಿವು ಮೂಡಿಸಿದರು. ಪರಿಸರ ಪ್ರೇಮಿ ಪ್ರಸನ್ನ ಅವರು ಮಾತನಾಡಿ ’ಪ್ರಕೃತಿಯ ಉಳಿವು ನಮ್ಮೆಲ್ಲರ ಉಳಿವು’ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸನ್ನ ಅವರ ಪುತ್ರಿ ಹೇಮಲತಾ ಅವರು ಉಪಸ್ಥಿತರಿದ್ದರು. ಶಿಕ್ಷಕಿ ಪ್ರಜ್ಞಾ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Exit mobile version