ಚಾರ್ಮಾಡಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ-ರಾಜ್ಯದಲ್ಲಿಯೇ ಒಂದು ಉತ್ತಮವಾದ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜ

0

ಚಾರ್ಮಾಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಗ್ರಾ. ಪಂ. ನಲ್ಲಿ ಜು.15ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಜನಸ್ಪಂದನ ಕಾರ್ಯಕ್ರಮ ಜನರು ಮಾತನಾಡುವ ಕಾರ್ಯಕ್ರಮ ಜನರು ಪರಿಹಾರ ಕಂಡುಕೊಳ್ಳುವ ಕಾರ್ಯಕ್ರಮ ಎಂದರು. ರಾಜ್ಯದಲ್ಲಿಯೇ ಒಂದು ಉತ್ತಮವಾದ ಕಾರ್ಯಕ್ರಮ ಪಂಚಾಯತ್, ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿರುವುದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಎಂದರು.

ಈ ವೇಳೆ ಉಪ ತಹಶೀಲ್ದಾರ್ ಜಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಚಾರ್ಮಾಡಿ ಗ್ರಾ.ಪಂ.ಅಧ್ಯಕ್ಷೆ ಶಾರದ, ಉಪಾಧ್ಯಕ್ಷೆ ನೀಲು, ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮುಂಡಾಜೆ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ ರಾವ್ , ಗ್ರಾ.ಪಂ. ಸದಸ್ಯರು, ಸಂಘದ ನಿರ್ದೇಶಕರು, ಗ್ರಾಮ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

ಶಾಸಕರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here