ಹೊಸಂಗಡಿ: ವಲಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ್ ಅವರು ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ ಇವರ ಸಮ್ಮುಖದಲ್ಲಿ ವಿತರಿಸಿದರು. ಯೋಜನೆಯ ವಲಯ ಮೇಲ್ವಿಚಾಕಿ ವೀಣಾ, ಒಕ್ಕೂಟದ ಅಧ್ಯಕ್ಷ ರೋಹಿತಾಕ್ಷ, ಸ್ಮಶಾನ ಸಮಿತಿ ಅಧ್ಯಕ್ಷ ಹರೀಶ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೊಸಂಗಡಿ ಸಾರ್ವಜನಿಕ ಹಿಂದೂ ರುಧ್ರಭೂಮಿಗೆ ಧರ್ಮಸ್ಥಳದಿಂದ ಸಹಾಯಧನ: ಮಂಜೂರಾತಿ ಪತ್ರ ಹಸ್ತಾಂತರ
