ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಜರುಗಿತು. ಕಾಲೇಜಿನ ಗಣಕಶಾಸ್ತೃ ವಿಭಾಗದ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಸುಧೀರ್ ಕೆ.ಎನ್. ತರಬೇತಿಯನ್ನು ನಡೆಸಿಕೊಟ್ಟರು.
ಕಾಲೇಜಿನ ರೋವರ್ಸ್-ರೇಂಜರ್ಸ್ ವಿಭಾಗದ ಮುಖ್ಯಸ್ಥರಾದ ಬೆಳಿಯಪ್ಪ ಕೆ. ಮತ್ತು ರಕ್ಷಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮೌಲ್ಯ ಸ್ವಾಗತಿಸಿದರು. ತನ್ವಿ ಕಾರ್ಯಕ್ರಮ ನಿರೂಪಿಸಿದರು. ಸುಭಾಷ್ ಧನ್ಯವಾದವಿತ್ತರು.