
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ, ಬಂಟರ ಸಂಘ ಉಜಿರೆ ವಲಯ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ವಲಯ ಬಂಟರ ಸಂಘದ ಅಧ್ಯಕ್ಷೆ ವನಿತಾ ವಿಶ್ವನಾಥ್ ಶೆಟ್ಟಿ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಸುರಭಿ, ಸುಜಯ ದಿನೇಶ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಉಜಿರೆ ಹಾಗೂ ಪದಾಧಿಕಾರಿಗಳು, ಸಮಿತಿ ಸದಸ್ಯರು ಭಾಗವಹಿಸಿದ್ದರು. 🙏