ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ನಿಂದ ಬೆಳ್ತಂಗಡಿಯಲ್ಲಿ ಆಟಿ ಕಷಾಯ, ಮೆಂತೆ ಗಂಜಿ ವಿತರಣೆ

0

ಬೆಳ್ತಂಗಡಿ: ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ನಡೆದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರ ನೇತೃತ್ವದಲ್ಲಿ 566ನೇ ಸೇವಾ ಯೋಜನೆ ಬೆಳ್ತಂಗಡಿ ಬಸ್ ಸ್ಟ್ಯಾಂಡಿನಲ್ಲಿ ಆಟಿದ ಕಷಾಯ ಮತ್ತು ಮೆತ್ತೆಗಂಜಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ ಕೇಸರಿ ಟ್ರಸ್ಟ್ ಜಿಲ್ಲಾಧ್ಯಕ್ಷ ಸಂತೋಷ್ ಕೂಲ್ಯ ನೆರೆವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಮಾತನಾಡಿ ಸದಾ ಜನರಿಂದ ಜನರಿಗೋಸ್ಕರ ಸೇವೆಯನ್ನು ಮಾಡುತ್ತಿರುವ ಬೆಳ್ತಂಗಡಿ ತಾಲೂಕಿನಲ್ಲಿ ಏಕೈಕ ಒಂದು ಸಂಘಟನೆ ಅಂದರೆ ದೀಪಕ್ ಜಿ. ಬೆಳ್ತಂಗಡಿಯವರ ಮುನ್ನಡೆಸುತ್ತಿರುವಂತಹ ರಾಜ ಕೇಸರಿ ಎಂದು ಈ ಕಾಲದಲ್ಲಿ ಇಂತಹ ಕಾರ್ಯಕ್ರಮಗಳು ನಶಿಸಿ ಹೋಗುತ್ತಿದೆ. ಇದನ್ನು ಉಳಿಸುವ ನಿಟ್ಟಿನಲ್ಲಿ ಇವತ್ತು ಬೆಳಿಗ್ಗೆ 6ಗಂಟೆಯಿಂದ ಬೆಳಗ್ಗೆ 10ಗಂಟೆ ತನಕ ಸರಿಸುಮಾರು 500ಕ್ಕಿಂತ ಅಧಿಕವಾಗಿ ಇದರ ಸಾರ್ವಜನಿಕರು ಸದುಪಯೋಗಪಡಿಸಿಕೊಂಡರು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ ನಿರೀಕ್ಷಕ ನಾಗೇಶ್ ಕದ್ರಿ, ತಾಲೂಕು ಪತ್ರಕರ್ತರ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಪತ್ರಕರ್ತ ಮನೋಹರ್ ಬಳಂಜ, ಸರ್ವಧರ್ಮದ ಗುರುಗಳು ಹಾಗೂ ಧಾರ್ಮಿಕ ಮುಖಂಡರುಗಳು, ಸಂಘ ಸಂಸ್ಥೆಯವರು, ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರು, ನಿರ್ವಾಹಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಬಂದು ಶುಭ ಹಾರೈಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸತೀಶ್ ಕಂಗಿತ್ತಿಲ್, ರಾಜ ಕೇಸರಿ ಸಂಘಟನೆಯ ಪದಾಧಿಕಾರಿಗಳಾದ ಪ್ರೇಮ್ ರಾಜ್ ರೋಷನ್ ಸ್ರಿಕ್ಕೇರಾ, ಪ್ರಶಾಂತ್ ಗುರುವಾಯನಕೆರೆ, ಸಂಪತ್, ಜಗದೀಶ್, ವಿನೋದ್ ಲಾಯಿಲ, ಸಂದೇಶ್, ಗಣೇಶ್, ಕಿಶನ್, ದೇವರಾಜ್ ಹಾಗೂ ರಾಜ ಕೇಸರಿ ಜಿಲ್ಲಾ ಪದಾಧಿಕಾರಿಗಳಾದ ಲೋಕೇಶ್ ಮಂಗಳದೇವಿ, ವರುಣ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here