
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿರುವ ನಿಗೂಢ ಸಾವು ಪ್ರಕರಣಗಳ ತನಿಖೆಗಾಗಿ ರಚನೆಗೊಂಡಿರುವ ವಿಶೇಷ ತನಿಖಾ ತಂಡ ಜು. 26ರಂದು ಬೆಳ್ತಂಗಡಿಗೆ ಆಗಮಿಸಲಿದೆ.
ಈಗಾಗಲೇ ಬೆಂಗಳೂರಿನಿಂದ ಮಂಗಳೂರಿಗೆ ಎಸ್.ಐ.ಟಿ. ತಂಡ ಬಂದಿಳಿದಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದ ತಂಡ ಬೆಳ್ತಂಗಡಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಜು.26ರಂದು ಭೇಟಿ ನೀಡಿ ತನಿಖೆ ಆರಂಭಿಸಲಿದೆ ಎಂದು ಮಾಹಿತಿ ಲಭ್ಯವಾಗಿದೆ.