
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಎಸ್.ಐ.ಟಿ. ತಂಡದ ಅಧಿಕಾರಿ.
ಜು.25ರಂದು ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ ಡಿಐಜಿ ಎಂ.ಎನ್.ಅನುಚೇತ್ ರವರು ತಂಡದ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಧರ್ಮಸ್ಥಳದಲ್ಲಿ ನಡೆದಿರುವ ನಿಗೂಢ ಸಾವು ಪ್ರಕರಣಗಳ ತನಿಖೆಗಾಗಿ ರಚನೆಗೊಂಡಿರುವ ವಿಶೇಷ ತನಿಖಾ ತಂಡದೊಂದಿಗೆ ಜು.25ರಂದು ರಾತ್ರಿ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದ ತಂಡ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದೆ. ಧರ್ಮಸ್ಥಳ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಸಮರ್ಥ್ ಗಾಣಿಗ ಜೊತೆಗಿದ್ದರು.