
ಬೆಳ್ತಂಗಡಿ : ಉತ್ತರ ಕನ್ನಡದ ಕುಮಟಾ ಕೋನಹಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಪದಾಧಿಕಾರಿಗಳು ಜು. 26ರಂದು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು.
ಸಮಿತಿ ಗೌರವಾಧ್ಯಕ್ಷ ನಿವೃತ್ತ ಎಸ್. ಪಿ., ಪೀತಾಂಬರ ಹೇರಾಜೆ, ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲ್ಲಿಂಬಿ, ಕ್ಷೇತ್ರದ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್, ಟ್ರಸ್ಟಿಗಳಾದ ನಾರಾಯಣ ಪೂಜಾರಿ ಮಚ್ಚಿನ, ಪ್ರಮಲ್ ಕುಮಾರ್ ಕಾರ್ಕಳ, ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ, ಜ್ಯೋತಿ ಪ್ರಮಲ್ ಕುಮಾರ್, ಜಯರಾಮ್ ಬೆಳುವಾಯಿ ಮೊದಲದವರು ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.