ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹೆಣ ಹೂತಿಟ್ಟಿದ್ದೇನೆಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.28ರಂದು ಎಸ್.ಐ.ಟಿಯಿಂದ ಮಹತ್ವದ ಕಾರ್ಯ ನಡೆಯಲಿದೆ.
ಮುಸುಕುಧಾರಿ ಇಂದು ಬೆಳಿಗ್ಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಬಂದಿದ್ದು ಇಲ್ಲಿಂದ ಧರ್ಮಸ್ಥಳಕ್ಕೆ ಕರೆದುಕೊಂಡು ಬರುತ್ತಿದ್ದಾರೆ.
ತಲೆಬುರುಡೆ ಸ್ಥಳ ಮಹಜರು ಪ್ರಕ್ರಿಯೆ ನಡೆಯಲಿದ್ದು, ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್, ಅರಣ್ಯ ಇಲಾಖೆ, ಭೂ ದಾಖಲೆ ವಿಭಾಗದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಧರ್ಮಸ್ಥಳ ಬುರುಡೆ ತೆಗೆದ ಜಾಗಕ್ಕೆ ತೆರಳಿದ್ದಾರೆ.