Site icon Suddi Belthangady

ಶಿಬರಾಜೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಬರಾಜೆ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇವರ ಸಹಕಾರದೊಂದಿಗೆ ಆ. 17ರಂದು ನಡೆಯಲಿರುವ ವಿವಿಧ ಕ್ರೀಡೆ, ಸಾಂಸ್ಕೃತಿಕ, ಮತ್ತು ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಸಭಾಂಗಣ ದಲ್ಲಿ ನಡೆಯಿತು.

ಅಧ್ಯಕ್ಷ ಸಂತೋಷ್ ಜೈನ್, ಗೌರವಾಧ್ಯಕ್ಷ ಟಿ.ಎಸ್. ನಿತ್ಯಾನಂದ ರೈ, ಕಾರ್ಯದರ್ಶಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿ ಅಕ್ಷತ್ ರೈ, ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕ್ರೀಡಾ ಸಮಿತಿ ಅಧ್ಯಕ್ಷ ನಿತೇಶ್ ಬಟ್ಯಾಲ್, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಪಾದೆ ಟ್ರಸ್ಟ್ ನ ಅಧ್ಯಕ್ಷ ವಿನೋದ್ ಎಸ್., ವೀರೇಂದ್ರ ಜೈನ್ ಉಪಸ್ಥಿತರಿದ್ದರು.

Exit mobile version