ಮಚ್ಚಿನ: ಬಾಂಬೂ ಸೊಸೈಟಿ ಆಪ್ ಇಂಡಿಯಾ ಬಿದಿರು ಗ್ರಾಮಗಳ ಕ್ಲಸ್ಟರ್ ಯೋಜನೆ ಹಾಗೂ ಬೆಳ್ತಂಗಡಿ ರಬ್ಬರ್ ಸೊಸೈಟಿ ಹಾಗೂ ಶ್ರೀ ಕ್ಷೇತ್ರ ಧ.ಗ್ರಾ.ಯೋಜನಾಭಿವೃದ್ಧಿ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಸಹಕಾರದೊಂದಿಗೆ 1250 ಬಿದಿರು ಗಿಡ ವಿತರಣೆ ಕಾರ್ಯಕ್ರಮ ಅನಂತೇಶ್ವರ ದೇವಸ್ಥಾನ ಬಳ್ಳಮಂಜ ದೇವಸ್ಥಾನದ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ ಮತ್ತು ದೇವಾಸ್ಥಾನ ಗುಮಾಸ್ತ ಬಾಲಕೃಷ್ಣ ಭಟ್ ಹಾಗೂ ಸುಧೀರ್ ಕುಮಾರ್ ಶೆಟ್ಟಿ (ಕೋರ ಬಿಟ್ಟು ಮನೆ) ಅವರಿಗೆ ಬಿದಿರು ಗಿಡವನ್ನು ಕೃಷಿ ವಿಭಾಗದ ಯೋಜನಾಧಿಕಾರಿಗಳಾದ ಬಾಲಕೃಷ್ಣ ಅವರು ವಿತರಣೆ ಮಾಡಿದರು.
ಬಿದಿರು ಬಾಂಬೂ ಸೊಸೈಟಿಯ ಮೇಲ್ವಿಚಾರಕ ಕುಮಾರ ನಾಥ್ ಅವರು ಬಿದಿರು ಕೃಷಿ ಬಗ್ಗೆ ಮಾತನಾಡಿ ಬಿದಿರು ವೇಗವಾಗಿ ಬೆಳೆಯುವ ಕೃಷಿಯಾಗಿದೆ. ಬಿದಿರಿನ ಬಹುಮುಖ ಉಪಯೋಗಗಳು ನಿರ್ಮಾಣ ಕಟ್ಟಡದ ಒಳಾಂಗಣ ಅಲಂಕಾರಕ್ಕಾಗಿ, ಪೀಠೋಪಕರಣಗಳ ತಯಾರಿಕೆಗಾಗಿ ಅಗರಬತ್ತಿ ತಯಾರಿಕೆಗೆ, ಕಾಗದ ತಯಾರಿಕೆಗೆ ಅತಿ ಹೆಚ್ಚು ಉಪಯೋಗವಾಗುತ್ತದೆ. ಬಿದಿರು ಗಿಡ ನಾಟಿ ಮಾಡುವ ವಿಧಾನ ಬಳಸಬೇಕಾದ ಗೊಬ್ಬರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಡಂತ್ಯಾರು ವಲಯದ ಮೇಲ್ವಿಚಾರಕ ಕೇಶವ ನಾಯ್ಕ, ಒಕ್ಕೂಟದ ಅಧ್ಯಕ್ಷ ವಿಜಯ್ ಮಡಕ್ಕಿಲ, ಮಚ್ಚಿನ ಒಕ್ಕೂಟ ಅಧ್ಯಕ್ಷೆ ಸುಧಾ, ಕೃಷಿ ಮೇಲ್ವಿಚಾರಕ ಕೃಷ್ಣ, ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ, ಕುದ್ರಡ್ಕ ಸೇವಾ ಪ್ರತಿನಿಧಿ ನಂದಿನಿ, ಶೌರ್ಯ ಘಟಕದ ಪ್ರತಿನಿಧಿ ಪ್ರಭಾಕರ ಉಪಸ್ಥಿತರಿದ್ದರು.