ಕನ್ಯಾಡಿ ಬ್ರಹ್ಮಾನಂದ ಶ್ರೀ ಗಳ ಚಾತುರ್ಮಾಸ್ಯ ವೃತಚಾರಣೆ: ಬೆಳ್ತಂಗಡಿ ಯುವವಾಹಿನಿ ಘಟಕದ ಪದಾಧಿಕಾರಿಗಳ ಭೇಟಿ

0

ಬೆಳ್ತಂಗಡಿ: ಕೋರ್ನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆಗೆ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಪದಾಧಿಕಾರಿಗಳು ಆ.7ರಂದು ಭಾಗವಹಿಸಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರನ್ನು ಸ್ವಾಮೀಜಿ ಗೌರವಿಸಿದರು. ಘಟಕದ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಘಟಕದ ಮಾಜಿ ಅಧ್ಯಕ್ಷ ಸದಾಶಿವ ಪೂಜಾರಿ ಊರ, ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ, ಘಟಕದ ಸಲಹೆಗಾರರಾದ ಸಚಿನ್ ಕುಮಾರ್ ನೂಜೋಡಿ, ಶ್ರೀಧರ ಪೂಜಾರಿ, ರಮೇಶ್ ಬಂಗೇರ ಒಟ್ಲ, ಜಾರಪ್ಪ ಪೂಜಾರಿ ಬೆಳಾಲು, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ, ಕೋಶಾಧಿಕಾರಿ ಜಯಶ್ರೀ ಕಿಲ್ಲೂರು, ಘಟಕದ ನಿರ್ದೇಶಕರಾದ ಅಶೋಕ್ ಕಲ್ಮಂಜ, ಸುದೀಪ್ ಸಾಲಿಯಾನ್, ಜಿತೇಶ್ ಕುಮಾರ್, ರಾಘವೇಂದ್ರ ಮೇಲಂತಬೆಟ್ಟು, ಸಂಪತ್ ಗರ್ಡಾಡಿ , ರಮ್ಯಾ ವಿ. ಕೋಟ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here