ಬೆಳಾಲು :ಶ್ರೀ ಅನಂತ ಪದ್ಮನಾಭ ಮಹಿಳಾ ಸಮಿತಿ ಅನಂತೋಡಿ ಬೆಳಾಲು ಹಾಗೂ ವರಮಹಾಲಕ್ಷ್ಮಿ ಸಮಿತಿ ಅನಂತೋಡಿ ಬೆಳಾಲು ಇದರ ನೇತೃತ್ವದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಅಸ್ರನ್ನ ಗಿರೀಶ್ ಬಾರಿತ್ತಾಯ ಪಾರಳ ಇವರ ಪೌರತ್ವದಲ್ಲಿ ನೆರವೇರಿತು.
ದೇವಸ್ಥಾನದ ಆಡಳಿತ ಮೋಕ್ತೇಸರ ಜೀವಂದರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರು ಮಹಿಳಾ ಸಮಿತಿಯ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿಗಳು ಸರ್ವ ಸದಸ್ಯರು ಹಾಗೂ ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಊರ ಭಕ್ತ ಅಭಿಮಾನಿಗಳು ಭಾಗವಹಿಸಿದ್ದರು.