ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಮತ್ತು ಸಮುದಾಯಗಳ ನಡುವೆ ವೈ ಮನಸ್ಸು ಉಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196(1)(2), 353(2) ಬಿಎನ್ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಧರ್ಮಗಳ ಮತ್ತು ಸಮುದಾಯಗಳ ನಡುವೆ ವೈಮನಸ್ಸು ಮೂಡಿಸುವ ಸಂದೇಶ; ವಸಂತ ಗಿಳಿಯಾರ್ ವಿರುದ್ಧ ಪ್ರಕರಣ ದಾಖಲು
