Site icon Suddi Belthangady

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌-ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಾಯ

ಬೆಳ್ತಂಗಡಿ: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಆ.10ರಂದು KSRTC ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ನಾಲ್ವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್‌ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಘಾಟಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಬಣಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version