ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

0

ಕಲ್ಲೇರಿ: ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 1 ತಿಂಗಳ ಬ್ರೈಡಲ್ ಮೇಕ್ಅಪ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರುಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರ ಕೌಶಲ್ಯದ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವ ಉದ್ಯೋಗ ಮಾಡಲು ಮಹಿಳೆಯರಲ್ಲಿ ಛಲ ಇಚ್ಛಾ ಶಕ್ತಿ ಇದ್ದಲ್ಲಿ ಯಾವ ಕೆಲಸ ಕೂಡ ಸುಲಭ ಸಾಧ್ಯ, ಇನ್ನೂ ಹೆಚ್ಚಿನ ಕೌಶಲ್ಯ ಪಡೆದು ಸ್ವ ಉದ್ಯೋಗಕ್ಕೆ ಎಲ್ಲರೂ ಪ್ರಯತ್ನ ಪಡೆಯಿರಿ ಎಂದು ಕರೆ ನೀಡಿದರು.

ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಬ್ರೈ ಡಲ್ ಮೇಕಪ್ ಗೆ ಇರುವ ಅವಕಾಶಗಳ ಬಗ್ಗೆ ತಿಳಿಸಿ, ತರಬೇತಿ ನಂತರ ಎಲ್ಲಾ ಅವಕಾಶ ಸದುಪಯೋಗಪಡಿಸಿಕೊಳ್ಳಲು ಸಲಹೆ ನೀಡಿದರು.

ಉಪ್ಪಿನಂಗಡಿ ಬ್ಯಾಂಕ್ ಆಫ್ ಬರೋಡ ಶಾಖೆಯ ವ್ಯವಸ್ತಾಪಕ ಯಶೋಧ ಅವರು ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಕ್ಕೆ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ತರಬೇತಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ತಣ್ಣೀರುಪಂಥ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಮಲ್ದೊಟ್ಟು, ಕರಾಯ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ, ಬ್ರೈಡಲ್ ಮೇಕ್ಅಪ್ ತರಬೇತುದಾರೆ ಸಂಧ್ಯಾ ಸಾತ್ವಿಕ್, ಟೈಲರಿಂಗ್ ತರಬೇತುದಾರೆ ಮೀನಾಕ್ಷಿ ಉಪಸ್ಥಿತರಿದ್ದರು. 30 ದಿನಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ನಿಶ್ಮಿತ ಸುನಿಲ್ ಸ್ವಾಗತಿಸಿದರು. ಸುಖಿತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಿಯಾ ಧನ್ಯವಾದಗೈದರು.

LEAVE A REPLY

Please enter your comment!
Please enter your name here