
ಧರ್ಮಸ್ಥಳ: ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಶ್ರೀ ಧ.ಮಂ ಆಂಗ್ಲ ಮಾಧ್ಯಮ ಧರ್ಮಸ್ಥಳದ ಪ್ರಾಥಮಿಕ . ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪರಿಸರ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಹಾಡು ನೃತ್ಯ , ಭಾಷಣ ಅಭಿನಯ ಗೀತೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.. ಮುಖ್ಯ ಅತಿಥಿಯಾಗಿ ಶ್ರೀ ಧ ಮ ತಾಂತ್ರಿಕ ವಿದ್ಯಾಲಯದ ಮುಖ್ಯ ಗ್ರಂಥಪಾಲಕಿ ಡಾ .ರಜತ ಪಿ. ಶೆಟ್ಟಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ಸೂಚಿಸಿ,ಪ್ರಕ್ರತಿಯ ನಡುವೆ ಮಕ್ಕಳು ಹೇಗೆ ಬೆಳೆಯಬೇಕು ಎಂಬುದನ್ನು ಎಳೆ ಎಳೆಯಾಗಿ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ. ವಿ. ಅವರ ಮಾರ್ಗದರ್ಶನದೊಂದಿಗೆ ಮೂಡಿಬಂದ ಈ ಕಾರ್ಯಕ್ರಮ, ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಗಿ , ಶಾಲಾ ವಿದ್ಯಾರ್ಥಿನಿ ಕುಮಾರಿ ಸಾನ್ವಿತ ಹಾಗೂ ಸಮನ್ವೀ ಸ್ವಾಗತಿಸಿದರು . ಕುಮಾರಿ ಶ್ರೇಯಸಿ ಹಾಗೂ ವಿಹಾನ್ ಕಾರ್ಯಕ್ರಮವನ್ನು ನಿರೂಪಿಸಿ ಸಾನಿಧ್ಯ ಹಾಗೂ ಆರುಹಿ ಧನ್ಯವಾದವನ್ನು ಅರ್ಪಿಸಿದರು. ಶಾಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.