ಕನ್ಯಾಡಿ 2: 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮವು ಎಸ್.ಡಿ.ಎಂ.ಸಿ.ಯ ಅಧ್ಯಕ್ಷ ಕೆ. ನಂದ ಅವರ ಉಪಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ಯಾಡಿ 2 ಬೃಂದಾವನ ಮನೆ ಪವಿತ್ರ ಸುಕುಮಾರ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭ ಮಾತುಗಳನ್ನಾಡಿದರು. ಮಹಾತ್ಮ ಗಾಂಧೀಜಿ ಮತ್ತು ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಗೌರವವನ್ನು ಸೂಚಿಸಲಾಯಿತು .
ಶಾಲಾ ನಾಯಕಿ ಅನನ್ಯ ನೇತೃತ್ವದಲ್ಲಿ ಘೋಷಣೆಯನ್ನು ಮಕ್ಕಳು ಹೇಳುವ ಮೂಲಕ ಹುತಾತ್ಮರಿಗೆ ಗೌರವವನ್ನು ಸಲ್ಲಿಸಲಾಯಿತು. ಮತ್ತು ಸಂಜನಾ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ, ಪ್ರಭಾಕರ್ ಗೌಡ ಬೊಳ್ಮಾ, ಸಿ.ಜೆ.ಪ್ರಭಾಕರ್, ಸೂರ್ಯಪ್ರಕಾಶ್ ಎಂ., ನೀಲಕಂಠ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ನಿವೃತ್ತ ಹಿರಿಯ ಶಿಕ್ಷಕಿ ವನಜಾ ಕುಮಾರಿ, ಎಸ್. ಡಿ. ಎಂ. ಸಿ ಉಪಾಧ್ಯಕ್ಷೆ ಚಂದ್ರಾವತಿ, ಪ್ರಭಾರ ಮುಖ್ಯ ಶಿಕ್ಷಕಿ ಪುಷ್ಪಾ ಎನ್., ಎಸ್.ಡಿ.ಎಮ್.ಸಿ ಯ ಸದಸ್ಯರು ಉಪಸ್ಥಿತರಿದ್ದರು.
ಮಕ್ಕಳ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮವು ಸಡಗರದಿಂದ ನೆರವೇರಿತು. ಶಾಲಾ ಶಿಕ್ಷಕ ವೃಂದದವರು, ಪೋಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಪುಷ್ಪಾ ಎನ್. ಸ್ವಾಗತಿಸಿದರು. ಮತ್ತು ಸಹ ಶಿಕ್ಷಕ ದೀಪಿಕಾ ಕಾರ್ಯಕ್ರಮವನ್ನು ನಿರೂಪಿಸಿದರು. ಮಕ್ಕಳಿಗೆ ಸಿಹಿ ತಿಂಡಿ ಮತ್ತು ಮಧ್ಯಾಹ್ನದ ಊಟವನ್ನು ನೀಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಸಹ ಶಿಕ್ಷಕ ನಾಗರಾಜ್ ಧನ್ಯವಾದವಿತ್ತರು.