
ಬಳಂಜ: ರಾಣೆಬೆನ್ನೂರು ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರೀ ಗುರುಪೂರ್ಣಿಮೆಯ ಅಂಗವಾಗಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಜನೆ ಮಂಡಳಿಯ ಕಾರ್ಯಕ್ರಮವನ್ನು ಮೆಚ್ಚಿ ಮಂಡಳಿಯ ಅಧ್ಯಕ್ಷೆ ಜ್ಯೋತಿ ಅವರನ್ನು ಗೌರವದಿಂದ ಸನ್ಮಾನಿಸಿದರು. ಹಾಗೆಯೇ ಮಂಡಳಿಯ ಸಂಚಾಲಕ ಹರೀಶ್ ವೈ ಚಂದ್ರಮ ಅವರನ್ನು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ನಿತ್ಯಾನಂದ ಕುಂದಾಪುರ ಅಭಿಮಾನಿ ಬಳಗ ರಾಣೇಬೆನ್ನೂರು ವಿಶೇಷವಾಗಿ ಗೌರವಿಸಿ, ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು. ಮಂಡಳಿಯ ತರಬೇತುದಾರೆ ಮಾನ್ಯ ಹಾಗೂ ಸದಸ್ಯರು ಉಪಸ್ಥಿತರಿದ್ದರು.