Site icon Suddi Belthangady

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಗಾರ”

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್. ಸಿ. ಆರ್. ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ. ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕುರಿತು ಆ. 25ರಂದು ರಾಕೇಶ್ ಕೆ.ಎನ್. ಅವರು ಕಾರ್ಯಗಾರ ನಡೆಸಿದರು.

ಈ ಕಾರ್ಯಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರಿಣಾಮಕಾರಿಯಾಗಿ ಓದುವ ವಿಧಾನಗಳು, ಸಮಯ ನಿರ್ವಹಣೆ, ಪ್ರಶ್ನಾಪತ್ರಿಕೆ ಪರಿಹಾರ ತಂತ್ರಗಳು ಮತ್ತು ನೈತಿಕ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ ಜಿ. ನಾಯಕ್, ಉಪನ್ಯಾಸಕರು ಉಪಸ್ಥಿತರಿದ್ದರು.

Exit mobile version