Site icon Suddi Belthangady

ಪೆರಾಡಿ: ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಾಧನೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೆ ಪೆರಾಡಿ ಪ್ರಾಥಮಿಕ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ ದೊರಕಿದೆ. ಆ. 30ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಹೇಮಾ ಅವರಿಗೆ ನೀಡಿ ಗೌರವಿಸಿದರು.

Exit mobile version