ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 7ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಗುರುಜಯಂತಿ, ಮಾಜಿ ಅಧ್ಯಕ್ಷ ದಿ. ಎನ್. ಪದ್ಮನಾಭಾ ಮಾಣಿಂಜ ಇವರಿಗೆ ನುಡಿನಮನ, ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.
ಕಾರ್ಯಕ್ರಮವನ್ನು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಉದ್ಘಾಟಿಸಲಿದ್ದಾದೆ. ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷಜಯಾನಂದ ಎಂ. ಗುರು ಸಂದೇಶ ನೀಡುವರು.
ವಿಧಾನ ಸಭಾ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜೀತಾ ವಿ. ಬಂಗೇರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ಕೃಷ್ಣಪ್ಪ ಪೂಜಾರಿ, ಬೆಳ್ತಂಗಡಿ ಸ. ಪ್ರ. ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಸುರೇಶ್ ಪೂಜಾರಿ,ಉಜಿರೆ ಎಸ್. ಡಿ. ಎಂ. ಕಾಲೇಜು ಪ್ರಾಂಶುಪಾಲ ಪ್ರೊ. ಡಾ. ವಿಶ್ವನಾಥ್, ಮೆರಿನ್ ಇಂಜಿನಿಯರಿಂಗ್ ರಾಜ್ಯದಲ್ಲಿ ಮಟ್ಟದ 5ನೇ ಸ್ಥಾನ ಪಡೆದ ಸಾತಿಕ್ ಎಸ್. ಪೂಜಾರಿ ಹೊಸಂಗಡಿ, ಎಸ್. ಎಸ್. ಎಲ್. ಸಿ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರಾಥನ ಹೆಚ್. ಕೆ., 4 ನೇ ಸ್ಥಾನ ಪಡೆದ ಸುಪ್ರಿಯಾ ಎಸ್. ಮೂಡುಕೋಡಿ, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವಕ್ಕೆ ಪಾತ್ರ ರಾದ ಅಪೇಕ್ಷಾ ಎನ್. ಎಸ್. ಉಜಿರೆ, ಚಲನಚಿತ್ರ ನಟ ದೀಕ್ಷಿತ್ ಅಂಡಿಂಜೆ, ಕಿರುತೆರೆ ನಟಿ ಅನನ್ಯ ವಿ. ಎಸ್. ಬೆಳಾಲು ಇವರಿಗೆ ಸನ್ಮಾನ ನಡೆಯಲಿದೆ. ಎಂದು ಸಂಘದ ಅಧ್ಯಕ್ಷ ಜಯವಿಕ್ರಮ್, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕೋಶಾಧಿಕಾರಿ ಪ್ರಶಾಂತ್ ಕುಮಾರ್, ಜೊತೆ ಕಾರ್ಯದರ್ಶಿ ಸಂತೋಷ ಉಪ್ಪಾರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ. ಕೆ. ಪ್ರಸಾದ್,ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ತಿಳಿಸಿದ್ದಾರೆ.