ಬೆಳ್ತಂಗಡಿ: ಲೋಕೋಪಯೋಗಿ ಉಪವಿಭಾಗದಲ್ಲಿ ಜೆ.ಇ. ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಆ ಜಾಗಕ್ಕೆ ಅಳದಂಗಡಿ ಮೂಲದ ಸೂರಜ್ ಹಾಣಿಂಜ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಬಂಟ್ವಾಳ ಲೋಕೋಪಯೋಗಿ ಉಪ ವಿಭಾಗದಲ್ಲಿ ಜೆ.ಇ. ಆಗಿ ಕಾರ್ಯನಿರ್ವಹಿಸುತ್ತಿದ್ದ ಸೂರಜ್ ಸೆ.4ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.