


ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಚಾರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ, ಅವರ ಕುಟುಂಬ ವರ್ಗದವರ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವ ಶಕ್ತಿಗಳ ಷಡ್ಯಂತ್ರವನ್ನು ಮಟ್ಟ ಹಾಕಿ ಅದಕ್ಕೆ ಕಾರಣೀಕರ್ತರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜನನಗಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ, ಕಾಸರಗೋಡು ಉಡುಪಿ ಜಿಲ್ಲೆಗಳ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶ ಸೆ.5ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಿದರು. ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದು
ದೇವಸ್ಥಾನದಿಂದ ಅಮೃತವರ್ಷಿಣಿ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.



ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದೇವಸ್ಥಾನ, ದೈವಸ್ಥಾನದ, ಬಸದಿ ಆಡಳಿತ ಮಂಡಳಿ, ಅನುವಂಶಿಕ ಮೊಕ್ತೇಸರರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ಧರ್ಮ ಜಾಗೃತಿ ಸಮಾವೇಶದಲ್ಲಿ 6 ನಿರ್ಣಯಗಳು
- ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಹಾಗೂ ಹೆಗ್ಗಡೆಯವರ ತೆಜೋವಧೆ ಬಗ್ಗೆ ರೂಪಿಸಿದ ಷಡ್ಯಂತ್ರಕ್ಕೆ ಸಂಬಂಧ ಪಟ್ಟಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ನ್ಯಾಯಯುತ ತನಿಖೆಗೆ ಅನುಕೂಲ ಮಾಡಿಕೊಟ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹಸಚಿವರು ಹಾಗೂ ಎಸ್.ಐ.ಟಿ. ತಂಡದ ಎಲ್ಲಾ ಆಧಿಕಾರಿಗಳಿಗೆ ಧನ್ಯವಾದ ಸಲ್ಲಿಕೆ
- ಸಾಮಾಜಿಕ ಜಾಲತಾಣಗಳು ಹಾಗು ದೃಶ್ಯಮಾಧ್ಯಮಗಳಲ್ಲಿ ಆಗುತ್ತಿರುವ ಸುಳ್ಳುಸುದ್ದಿಯ ಪ್ರಸಾರವನ್ನು ತಡೆಗಟ್ಟಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.
- ಶ್ರದ್ಧಾಕೇಂದ್ರಗಳು ಹಾಗೂ ಧಾರ್ಮಿಕ ನಂಬಿಕೆಗಳ ವಿರುದ್ಧ ಹೇಳಿಕೆ ನೀಡಿ ಶಾಂತಿಭಂಗ ಮಾಡುತ್ತಿರುವ ಸಂಘ-ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
- ಮುಂದೆ ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆದರೆ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಲಾಗುವುದು.
- ಇಂತಹ ಸಂಚುಗಳು ಆಗಾಗ ನಡೆಯುತ್ತಿರುವುದರಿಂದ ಧರ್ಮ ಸಂರಕ್ಷಣಾ ಸಮಿತಿಯನ್ನು ಬಲಪಡಿಸಿ ವರ್ಷಕ್ಕೆ ಒಂದು ಬಾರಿ ಇಂತಹ ಸಮಾವೇಶವನ್ನು ಅಲ್ಲಲ್ಲಿ ಆಯೋಜಿಸಬೇಕು.
- ಎಲ್ಲರೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ದೃಢಸಂಕಲ್ಪದಿಂದ ನಿಂತು ಧರ್ಮ ಸಂರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿರುತ್ತೇವೆ ಎಂದು ನಿರ್ಧರಿಸಲಾಯಿತು.
- ಠರಾವಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಗೃಹಸಚಿವರು ಮತ್ತು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರ್ಶನ್ ಹೆಚ್.ವಿ. ಅವರಿಗೆ ಕಳುಹಿಸಲು ನಿರ್ಧರಿಸಲಾಯಿತು.
ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ -ವಿಧ್ಯಾರ್ಥಿನಿಯರಿಂದ ಪ್ರಾರ್ಥನೆ ಮಾಡಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಮ್ ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.









