Site icon Suddi Belthangady

ಗುರುವಾಯನಕೆರೆ: ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆ-ರೂ.144 ಕೋಟಿ ವ್ಯವಹಾರ-ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಗುರುವಾಯನಕೆರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ಮಹಾಸಭೆಯು ಸೆ.12ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು. ಸಹಕಾರಿ ಸಂಘವು ಪ್ರಾರಂಭಗೊಂಡು 100ವರ್ಷ ಪೂರೈಸಿದ ಹಿನ್ನಲೆ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ನಾರಾಯಣ ರಾವ್ ಎಂ. ಅವರು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ರ ಸಾಲಿನಲ್ಲಿ ಒಟ್ಟು 2602 ಸದಸ್ಯರನ್ನು ಹೊಂದಿದ್ದು 2,39,34,710 ಪಾಲು ಬಂಡವಾಳ ಹೊಂದಿದೆ. ಒಟ್ಟು ರೂ. 31,79,31,476 ಠೇವಣಿ ಸಂಗ್ರಹವಾಗಿರುತ್ತದೆ. ರೂ.16,36,91,502ಕೋಟಿ ಸಾಲ ವಿತರಿಸಿ, ರೂ.144ಕೋಟಿ ವ್ಯವಹಾರ ನಡೆಸಿ ರೂ.59,99,798ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಡ್‌ ನೀಡುವುದಾಗಿ ಘೋಷಿಸಿದರು. ಸಂಘವು ಶತಮಾನೋತ್ಸವದ ಹೊಸ್ತಿಲಲ್ಲಿ ಇರುವುದರಿಂದ ಸಂಘ ಪ್ರಾರಂಭಿಸಲು ಸಹಕಾರ ನೀಡಿದ ಹಿರಿಯ ಸದಸ್ಯರಿಗೆ ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ 75%ಕಿಂತ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಡಿಗ್ರಿ, ವೃತ್ತಿಪರ ಕೊರ್ಸ್ ವಿದ್ಯಾರ್ಥಿಗಳಿಗೆ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್. ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ವಡಿವೇಲು ನಿರ್ದೇಶಕರಾದ ಭಗೀರಥ ಜಿ., ಸುಜಿತಾ ವಿ.ಬಂಗೇರ, ಸಚಿನ್ ಕುಮಾರ್ ನೂಜೋಡಿ, ಅನಂತರಾಜ್ ಜೈನ್, ನಾರಾಯಣ ಪೂಜಾರಿ,ಪುರಂದರ ಶೆಟ್ಟಿ, ಅರುಣ್ ಕುಮಾರ್, ಜಯಂತಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ಮಮತಾ, ಚೇತನ ಕೆ., ಭಾಗ್ಯಶ್ರೀ ಡಿ., ಮಧುರಾಜ್ ಎಸ್. ವಿ., ಅಕ್ಷತ್, ಯಶೋಧ ಸಹಕರಿಸಿದರು.

Exit mobile version