ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ, ಕಾಶಿ ಶೆಟ್ಟಿ ಮತ್ತು ಮಕ್ಕಳು ಗುರುವಾಯನಕೆರೆ ನವಶಕ್ತಿ, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಂಗಳೂರು ಬಂಟರ ಸಂಘ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಸೆ. 14ರಂದು ಬೆಳಿಗ್ಗೆ 10.30ರಿಂದ ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಸಂಘದ ಗೌರವ ಮಾರ್ಗದರ್ಶಕ, ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ನೆರವೇರಿಸಲಿದ್ದಾರೆ. ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಅನೂಪ್ ಎ. ಶೆಟ್ಟಿ ಐ.ಪಿ.ಎಸ್., ಡಿಸಿಪಿ ಬೆಂಗಳೂರು ನಗರ, ಅಜಿತ್ ಎಂ. ಕೆ.ಎ.ಎಸ್., ಸ್ಪೆಷಲ್ ಲ್ಯಾಂಡ್ ಎಕ್ಸೆಷನ್ ಆಫೀಸರ್, ಎ.ಆರ್.ಐ.ಡಿ.ಇ, ಬೆಂಗಳೂರು, ಮಂಗಳೂರು ವಲಯ ಹಸ್ತಾ ಶೆಟ್ಟಿ ಎ.ಸಿ.ಎಫ್ (ಪ್ರೊಬೇಶನ್), ಬೆಂಗಳೂರು ಬಂಟರ ಸಂಘ ಗೌರವ ಕಾರ್ಯದರ್ಶಿ ವಿಜಯ ಜೆ. ಶೆಟ್ಟಿ ಹಾಲಾಡಿ, ಮಂಗಳೂರು ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಜ್ ಬಿ. ರೈ, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಯಂತ ಶೆಟ್ಟಿ ಕುಂಟಿನಿ, ತಾಲೂಕು ಸಂಚಾಲಕ ಮಾತೃ ಸಂಘ ಜಯರಾಮ ಭಂಡಾರಿ, ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಭಾಗವಹಿಸಲಿದ್ದಾರೆ.