ಧರ್ಮಸ್ಥಳ: ಸೆ. 17ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಿಂದ ಅಧಿಕಾರಿಗಳ ಜೊತೆಗೆ ನೇತ್ರಾವತಿ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಕಳೇಬರಹದ ಕಾರ್ಯಾಚರಣೆ ನಡೆಸಲು ತಂಡ ಆಗಮಿಸಿದೆ. ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಆರೋಪ ಮಾಡಿರುವ ಪ್ರಕರಣದಲ್ಲಿ ಎರಡನೇ ಹಂತದ ಕಾರ್ಯಾಚರಣೆ ಎಸ್.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ.
ವಲಯ ಅರಣ್ಯ ಇಲಾಖೆಗೆ ಸೇರಿದ 12 ಎಕ್ರರೆಯಲ್ಲಿ ಅಧಿಕಾರಿಗಳ ಜೊತೆಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು, ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡ, ಮಂಗಳೂರು ಕೆ.ಎಮ್.ಸಿ ವೈದ್ಯರು, ಬಾಂಬ್ ನಿಷ್ಕ್ರೀಯ ದಳ ಸಿಬ್ಬಂದಿ ಸೇರಿ ಸುಮಾರು 50ಕ್ಕೂ ಹೆಚ್ಚು ಅಧಿಕಾರಿಗಳು ಭೂಮಿಯ ಮೇಲ್ಬಾಗದಲ್ಲಿರುವ ಕಳೇಬರಗಳ ಮಹಜರು ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲು ಕಾರ್ಯಾಚರಣೆಗೆ ಇಳಿದಿದ್ದಾರೆ.