ಬೆಳ್ತಂಗಡಿ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಸಮೀಪ ಮುಂಡಾಜೆಯ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡ ಘಟನೆ ಸೆ.22ರಂದು ಮಧ್ಯಾಹ್ನ 3ಗಂಟೆ ವೇಳೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಹರಿಯವ ನದಿಯಲ್ಲಿ ಆನೆ ಸಂಚಾರಿಸುವುದನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ. ಹೆದ್ದಾರಿಗೆ ಸುಮಾರು 50ಮೀ. ದೂರದಲ್ಲಿ ನೀರಾಟ ಆಡುತ್ತಿದ್ದ ಸಲಗವನ್ನು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿಗೆ ಅಟ್ಟಿದ್ದಾರೆ.