ಅಳದಂಗಡಿ: ಶ್ರೀ ಸತ್ಯ ದೇವತಾ ಕಲ್ಲುರ್ಟಿ ದೈವ ಸ್ಥಾನಕ್ಕೆ ಕಾರ್ಕಳ ತಾಲೂಕಿನ ಮಿಯಾರ್ ಗ್ರಾಮದ ಬಂಗ್ಲೆಬದಿ ಮನೆಯ ಲೋಕಯ್ಯ ಅವರ ಕುಟುಂಬ ಸಮೇತರಾಗಿ ಆಗಮಿಸಿ ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರವನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.