ಮಿಯಾರು: ವನದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನವರಾತ್ರಿ ದಿನದ ಪ್ರಯುಕ್ತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ಅಲಂಕಾರ ಸೇವೆಗೆ 15000 ರೂ ನೀಡಿ ಇನ್ನಷ್ಟು ದೇವರ ಸೇವೆಗೆ ಜೊತೆಯಾಗುವುದಾಗಿ ತಿಳಿಸಿದರು.
ದೇವಳದ ಆಡಳಿತ ಸಮಿತಿ ಅಧ್ಯಕ್ಷ ಬೊಮ್ಮಣ್ಣ ಗೌಡ ಮಠ, ಕಾರ್ಯದರ್ಶಿ ಸಂತೋಷ್ ಕೆ.ಸಿ., ದೇವಳದ ಸದಸ್ಯರು, ದೇವಳದ ಗೌರವ ಸಲಹೆಗಾರ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ಪಂಚಾಯತ್ ಅಧ್ಯಕ್ಷ ಪೂರ್ಣಕ್ಷ ಬಾಯಿತ್ಯಾರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.